students

ಪ್ರವೇಶ ಪರಿಕ್ಷೆಗೆ ಅರ್ಜಿ ಆಹ್ವಾನ

Webdesk | Saturday, December 23, 2017 5:28 PM IST

ಬಾಗಲಕೋಟೆ, ಡಿ.23:: 018-19 ನೇ ಸಾಲಿಗೆ ಕರ್ನಾಟಕ ಶಿಕ್ಷಣಸಂಸ್ಥೆಗಳ ಸಂಘದ ವಸತಿ ಶಾಲೆಗಳಿಗೆ ಪ್ರವೇಶ ಪರಿಕ್ಷೆ 2018 ಫೆಬ್ರವರಿ 18 ರಂದು ನಡೆಸಲಾಗುವುದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಕ ನಿರ್ದೇಶಕರು ತಿಳಿಸಿದ್ದಾರೆ. 
ಶಿಕ್ಷಣ ಸಂಸ್ಥೆಗಳ ಸಂಘದ ಆಧೀನದಲ್ಲಿ ಬರುವ ಮೂರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ, ಅಟಲ್‍ಬಿಹಾರಿ ವಾಜಪೇಯಿ, ಡಾ:ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ, ವಸತಿ ಶಾಲೆಗಳಿಗೆ 6ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಪ್ರವೇಶ ಪರಿಕ್ಷೆ ನಡೆಸಲಾಗುತ್ತಿದ್ದು ಪ್ರವೇಶ ಬಯಸುವ ಸದ್ಯ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಗಳು ಇಲಾಖೆಯ ಎಲ್ಲ ವಸತಿ ಶಾಲೆಗಳಲ್ಲಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯಾಲಯದಲ್ಲಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳಲ್ಲಿ ಲಬ್ಯವಿದ್ದು, ಅರ್ಜಿ ಭರ್ತಿಮಾಡಿ ಸಲ್ಲಿಸಲು ಜನವರಿ 13, 2018 ಕೊಣೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಸಮೀಪದ ವಸತಿ ಶಾಲೆಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಕೋರಲಾಗಿದೆ.